“ಕಡಿಮೆ ಸಮಯದಲ್ಲಿ ದುಪ್ಪಟ್ಟು ಲಾಭ ಗಳಿಸಿ” ಎಂಬ ಆಮಿಷವೊಡ್ಡಿ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ಜನರಿಗೆ ಸುಮಾರು ₹20 ಕೋಟಿ ವಂಚಿಸಿರುವ ಬಗ್ಗೆ 2023ರ ಜನವರಿಯಿಂದ ಏಪ್ರಿಲ್ 30ರವರೆಗಿನ ಅವಧಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದು, ಇವುಗಳ ಪತ್ತೆಗೆ ಸಿಸಿಬಿಯ ಹೆಚ್ಚುವರಿ ಕಮಿಷನರ್ ಚಂದ್ರಗುಪ್ತ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. “ವಂಚನೆಯ ಹಿಂದೆ ವ್ಯವಸ್ಥಿತ ಜಾಲವಿರುವುದು ಗೊತ್ತಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
short by
Koushik KS /
08:33 am on
01 May