ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕನ್ನಡಿಗರು ಇದ್ದರೂ ಕೇಂದ್ರ ಸರ್ಕಾರ ನೀಡುವ ನಾಗರಿಕ ಪ್ರಶಸ್ತಿಗಳಿಗೆ ಅಂತಹವರನ್ನು ಶಿಫಾರಸು ಮಾಡದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು. ಮೈಸೂರಿನಲ್ಲಿ ನಡೆದ ಡಾ. ರಾಜ್ಕುಮಾರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡಿಗರಾದ ಭೀಮಸೇನ ಜೋಷಿಯವರಿಗೆ ಮಹಾರಾಷ್ಟ್ರ ಸರ್ಕಾರದ ಶಿಫಾರಸಿನ ಮೇಲೆ ಭಾರತ ರತ್ನ ನೀಡಲಾಗಿತ್ತು ಎಂದರು.
short by
Lloyd Dias /
04:56 pm on
27 Apr