ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲೆಲ್ಲಾ ಸರ್ವನಾಶ ತರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯ ಬೆತ್ತಲೆ ಮೆರವಣಿಗೆ, ಜೈನ ಮುನಿ ಹತ್ಯೆ, ರಾಮೇಶ್ವರಂ ಕೆಫೆ ಸ್ಫೋಟ, ನೇಹಾ ಹಿರೇಮಠ ಕೊಲೆ ಆಯಿತು. ಕಾಂಗ್ರೆಸ್ನ ತುಷ್ಟೀಕರಣ ನೀತಿಯಿಂದ ಇಂತಹ ಘಟನೆಗಳು ನಡೆಯುತ್ತಿವೆ” ಎಂದರು. ಕಾಂಗ್ರೆಸ್ ಜನರನ್ನು ದಿವಾಳಿ ಮಾಡಲು ಹೊರಟಿದೆ ಎಂದು ಮೋದಿ ಹೇಳಿದರು.
short by
Prashant badiger /
01:31 pm on
28 Apr