For the best experience use Mini app app on your smartphone
₹18,172 ಕೋಟಿ ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ಶನಿವಾರ ಕೇಂದ್ರ ಸರ್ಕಾರ ₹3,454 ಕೋಟಿ ಬಿಡುಗಡೆ ಮಾಡಿದ್ದು, “ಕೇಂದ್ರ ಸರ್ಕಾರ ಮತ್ತೊಮ್ಮೆ ಕನ್ನಡಿಗರಿಗೆ ವಂಚನೆ ಮಾಡಿದೆ” ಎಂದು ರಾಜ್ಯ ಕಾಂಗ್ರೆಸ್ ತನ್ನ ‘X’ ಖಾತೆಯಲ್ಲಿ ಪ್ರತಿಕ್ರಿಯಿಸಿದೆ. ಇದು[₹3,454 ಕೋಟಿ] ನಮಗೆ ಅಗತ್ಯವಿರುವ ಮೊತ್ತದ ಕಾಲು ಭಾಗಕ್ಕಿಂತ ಕಡಿಮೆ ಎಂದು ಬರೆದಿರುವ ಕಾಂಗ್ರೆಸ್, ನ್ಯಾಯಯುತ ಪರಿಹಾರಕ್ಕಾಗಿ ಕನ್ನಡಿಗರು ಮತ್ತೊಮ್ಮೆ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೇ? ಎಂದು ಪ್ರಶ್ನಿಸಿದೆ.
short by Koushik KS / 02:13 pm on 27 Apr
For the best experience use inshorts app on your smartphone