For the best experience use Mini app app on your smartphone
ಲೋಕಸಭಾ ಚುನಾವಣೆಗೆ ಶುಕ್ರವಾರ ನಡೆದ ಮತದಾನ ವೇಳೆ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂ ಹಾನಿಗೊಳಗಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದು, ಶುಕ್ರವಾರ 9 ಮಂದಿ ಮತದಾನ ಮಾಡಿದ್ದರು. ಮತದಾನ ಬಹಿಷ್ಕಾರದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಗಲಾಟೆ ಪ್ರಕರಣದಲ್ಲಿ 25 ಜನರನ್ನು ಬಂಧಿಸಲಾಗಿದೆ.
short by Koushik KS / 05:09 pm on 27 Apr
For the best experience use inshorts app on your smartphone