2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಎಲ್ಲಾ 15 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಸಾಕ್ಷ್ಯಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ವಿಚಾರಣೆ ಹಂತದಲ್ಲೇ ಓಬಳರಾಜು, ರುದ್ರಪ್ಪ, ರಂಗನಾಥ್ ವಿರುದ್ಧದ ಆರೋಪಗಳನ್ನು ಕೈ ಬಿಡಲಾಗಿತ್ತು. ಎರಡನೇ ಆರೋಪಿ ಶಿವಕುಮಾರಯ್ಯ ವಿಚಾರಣಾ ವೇಳೆ ಸಾವನ್ನಪ್ಪಿದ್ದರು.
short by
Koushik KS /
08:59 am on
27 Apr