ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ವಿಶೇಷ ತನಿಖಾ ತಂಡವು (ಎಸ್ಐಟಿ) ಅವರನ್ನು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದೆ. ಅವರು ಲೈಂಗಿಕ ಹಗರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದ ಮೊದಲ ಆರೋಪಿಯಾಗಿದ್ದಾರೆ. ಎಸ್ಐಟಿ ಎಸ್ಪಿ ಸಿ.ಎ.ಸೈಮನ್ ನೇತೃತ್ವದ ತಂಡವು ಬೆಂಗಳೂರಿನ ದೇವೇಗೌಡರ ನಿವಾಸದಲ್ಲಿದ್ದ ರೇವಣ್ಣರನ್ನು ವಶಕ್ಕೆ ಪಡೆದಿದೆ. ಎಸ್ಐಟಿ ರೇವಣ್ಣ ವಿರುದ್ಧ ಲುಕ್ಔಟ್ ನೊಟಿಸ್ ಜಾರಿಗೊಳಿಸಿತ್ತು.
short by
Lloyd Dias /
07:18 pm on
04 May