For the best experience use Mini app app on your smartphone
ಪಿರಿಯಾಪಟ್ಟಣದ ತಾಲ್ಲೂಕಿನ ಚಪ್ಪರದಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಶ್ರೀ ಕಾಡು ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಳೆ-ಬೆಳೆಗಾಗಿ ವಿಶೇಷ ಪೂಜೆ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮಸ್ಥರು ಸ್ವಾಮಿಯ ಆರಾಧನೆಗೆ ಸಿದ್ಧತೆಗಳನ್ನು ಮಾಡಿಕೊಂಡು ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ವಿಶೇಷ ಪೂಜೆ ಹಿನ್ನೆಲೆಯಲ್ಲಿ ಜನರು ಬಸವ ಮೂರ್ತಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು.
short by Koushik KS / 06:13 pm on 30 Apr
For the best experience use inshorts app on your smartphone