ಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಭಾನುವಾರ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಕೇಳಿದ್ದು ₹18,171 ಕೋಟಿ ಬರ ಪರಿಹಾರ, ಆದರೆ ಕೇಂದ್ರ ಸರ್ಕಾರ ₹3,454 ಕೋಟಿ ಮಾತ್ರ ಬಿಡುಗಡೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಕೇಂದ್ರದ ವಿರುದ್ಧ ಪ್ಲೇಕಾರ್ಡ್ ಪ್ರದರ್ಶಿಸಿ ಧಿಕ್ಕಾರ ಕೂಗಲಾಯಿತು.
short by
Prashant badiger /
11:18 am on
28 Apr