ಹಿಂದುಳಿದವರಿಗೆ ನ್ಯಾಯ ಒದಗಿಸಲು ಆರಂಭಿಸಿದ್ದ ರಾಯಣ್ಣ ಬ್ರಿಗೇಡ್ ಅನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮೇರೆಗೆ ನಿಲ್ಲಿಸಿದೆ, ಆ ಸಂಘಟನೆ ಈಗ ಇದ್ದಿದ್ದರೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತೇನೋ ಎಂದು ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. “ಚುನಾವಣೆ ಬಳಿಕ ಹಿಂದುಳಿದವರ, ದಲಿತರ ರಾಜ್ಯ ಮಟ್ಟದ ಸಭೆ ಕರೆಯುತ್ತೇನೆ” ಎನ್ನುವ ಮೂಲಕ ಈಶ್ವರಪ್ಪ ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸುಳಿವು ನೀಡಿದ್ದಾರೆ.
short by
Prashant badiger /
07:02 pm on
30 Apr