ಸರಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಮೈಸೂರಿನ ಕುವೆಂಪುನಗರ ಪೊಲೀಸರು ಬಂಧಿಸಿ, ₹3.3 ಲಕ್ಷ ಮೌಲ್ಯದ 55 ಗ್ರಾಂ ತೂಕದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಂಡಿದ್ದಾರೆ. ಶ್ರೀರಾಂಪುರ ಎರಡನೇ ಹಂತದ ಮಧುವನ ಉದ್ಯಾನದಲ್ಲಿ ಏ.23ರಂದು ಬೆಳಗ್ಗೆ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಸರ ಕಿತ್ತುಕೊಂಡು ಆರೋಪಿ ಪರಾರಿಯಾಗಿದ್ದನು. ಅದೇ ದಿನ ಸಂಜೆ ದೇವಯ್ಯನಹುಂಡಿ ಬಳಿಯ ಕಲ್ಯಾಣಮಂಟಪದಲ್ಲಿ ಆತ ಜಗಳ ಮಾಡುತ್ತಿದ್ದಾಗ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
short by
Koushik KS /
08:15 am on
27 Apr