For the best experience use Mini app app on your smartphone
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಜತೆಯಾಗಿದ್ದು ಮತ್ತಷ್ಟು ಬಲ ಬಂದಂತಾಗಿದೆ ಎಂದರು. “ಎರಡೂ ಪಕ್ಷಗಳು ಒಡೆಯರ್ ಗೆಲುವಿಗೆ ಶ್ರಮಿಸಿದ್ದು ದೊಡ್ಡಮಟ್ಟದ ಗೆಲುವಿಗೆ ಸಹಕಾರಿಯಾಗಲಿದೆ. ಯದುವೀರ್ ಸಾಮಾನ್ಯರಲ್ಲಿ ಒಬ್ಬರಂತೆ ಬೆರೆತಿದ್ದಾರೆ” ಎಂದು ಅವರು ಹೇಳಿದರು.
short by Lloyd Dias / 07:21 pm on 28 Apr
For the best experience use inshorts app on your smartphone