ಲೈಂಗಿಕ ದೌರ್ಜನ್ಯದ ಆರೋಪ ಹೊತ್ತು ಜೆಡಿಎಸ್ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮಾಹಿತಿ ನೀಡಿದೆ. ರಾಜತಾಂತ್ರಿಕ ಪಾಸ್ಪೋರ್ಟ್ನಲ್ಲಿ ಪ್ರಜ್ವಲ್ ಜರ್ಮನಿಗೆ ಪರಾರಿಯಾಗಿದ್ದಾರೆ. ಇಂಟರ್ಪೋಲ್ ಪ್ರಕಾರ, ಬ್ಲೂ ಕಾರ್ನರ್ ನೋಟಿಸ್ ದೇಶವು "ಜಾಗೃತಗೊಳ್ಳಲು ಮತ್ತು ಮಾಹಿತಿ ಹಂಚಿಕೊಳ್ಳಲು" ಅನುವು ಮಾಡುತ್ತದೆ.
short by
Koushik KS /
04:53 pm on
04 May