ಶರಣರ ಬದುಕು ಸರ್ವಕಾಲಕ್ಕೂ ಆದರ್ಶವಾಗಿರಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಹೇಳಿದರು. ಮೈಸೂರಿನ ಸುತ್ತೂರು ಮಠ ಹಾಗೂ ಜೆಎಸ್ಎಸ್ ವಿದ್ಯಾಪೀಠ ವತಿಯಿಂದ ಆಯೋಜಿಸಿದ್ದ ಜೀವನೋತ್ಸಾಹ ಶಿಬಿರವನ್ನು ಉದ್ಘಾಟಿಸಿದ ಅವರು, ಶರಣರು ಕರ್ಮ ಸಿದ್ಧಾಂತವನ್ನು ಕಾಯಕವನ್ನಾಗಿಸಿದವರು, ಅವರ ನಡೆ-ನುಡಿಗಳಲ್ಲಿ ಸಮನ್ವಯತೆ ಇತ್ತು ಎಂದರು. ಜನವಾಣಿಯನ್ನು ದೇವವಾಣಿಯನ್ನಾಗಿಸಿದ್ದು ಶರಣ ಸಂಸ್ಕೃತಿ ಎಂದು ಅವರು ಹೇಳಿದರು.
short by
Prashant badiger /
11:27 pm on
30 Apr