For the best experience use Mini app app on your smartphone
ಸಂಸದ ಶ್ರೀನಿವಾಸ್ ಪ್ರಸಾದ್ ನಿಧನದ ಹಿನ್ನೆಲೆ ಸರಗೂರು ಪಟ್ಟಣದಲ್ಲಿ ಮಂಗಳವಾರ ಪ್ರಗತಿಪರ ಸಂಘಟನೆಗಳು ಹಾಗೂ ವರ್ತಕರ ಮಂಡಳಿಯಿಂದ ಅಂಗಡಿಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಲಾಯಿತು. ಈ ವೇಳೆ ಮಾತನಾಡಿದ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, “ಬುದ್ಧ, ಬಸವ, ಅಂಬೇಡ್ಕರ್ ತತ್ವ-ಸಿದ್ಧಾಂತಗಳನ್ನು ಅಳವಡಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್, ದೀನ ದಲಿತರಿಗೆ ದಾರಿದೀಪವಾಗಿದ್ದರು ಎಂದರು. ಈ ವೇಳೆ ಶ್ರೀನಿವಾಸ್ ಪ್ರಸಾದ್‌ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
short by Prashant badiger / 07:48 pm on 30 Apr
For the best experience use inshorts app on your smartphone