ಸಂಸದ ಶ್ರೀನಿವಾಸ್ ಪ್ರಸಾದ್ ಸರಳ ಸಜ್ಜನಿಕೆಯ ಸ್ವಾಭಿಮಾನಿ ವ್ಯಕ್ತಿಯಾಗಿದ್ದು, ಅವರ ಆದರ್ಶ ಗುಣಗಳು ಸಮಾಜಕ್ಕೆ ಮಾದರಿ ಎಂದು ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಪ್ರಭಾಕರ್ ಹೇಳಿದರು. ಸಾಲಿಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ದಲಿತರ ಧ್ವನಿಯಂತಿದ್ದ ಶ್ರೀನಿವಾಸ್ ಪ್ರಸಾದ್, ಸಜ್ಜನ, ನೇರ, ನಿಷ್ಠುರ ರಾಜಕಾರಣಿಯೂ ಆಗಿದ್ದರು ಎಂದರು. ಈ ವೇಳೆ ದಲಿತ ಮುಖಂಡ ರಾಂಪುರ ಲೋಕೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
short by
Prashant badiger /
06:31 pm on
30 Apr