ಮತದಾನ ಮಾಡಿದ ನಂತರ ವ್ಯಕ್ತಿಯೊಬ್ಬರು ತೊರೆಗೆ ಬಿದ್ದು ಮೃತಪಟ್ಟ ಘಟನೆ ಸಾಲಿಗ್ರಾಮ ತಾಲ್ಲೂಕಿನ ಕುಪ್ಪೆ ಗ್ರಾಮದಲ್ಲಿ ನಡೆದಿದೆ. 55 ವರ್ಷದ ನಾಗರಾಜು ಬೆಳಗ್ಗೆ 9 ಗಂಟೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ್ದರು. ಆ ನಂತರ ಹೊಸೂರು ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತೊರೆಯ ಬಳಿ ಇರುವ ಕಿರು ಸೇತುವೆಯ ಮೇಲೆ ಕುಳಿತಿದ್ದಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
short by
Koushik KS /
07:55 am on
27 Apr