For the best experience use Mini app app on your smartphone
ಮತದಾನ ಮಾಡಿದ ನಂತರ ವ್ಯಕ್ತಿಯೊಬ್ಬರು ತೊರೆಗೆ ಬಿದ್ದು ಮೃತಪಟ್ಟ ಘಟನೆ ಸಾಲಿಗ್ರಾಮ ತಾಲ್ಲೂಕಿನ ಕುಪ್ಪೆ ಗ್ರಾಮದಲ್ಲಿ ನಡೆದಿದೆ. 55 ವರ್ಷದ ನಾಗರಾಜು ಬೆಳಗ್ಗೆ 9 ಗಂಟೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ್ದರು. ಆ ನಂತರ ಹೊಸೂರು ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತೊರೆಯ ಬಳಿ ಇರುವ ಕಿರು ಸೇತುವೆಯ ಮೇಲೆ ಕುಳಿತಿದ್ದಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
short by Koushik KS / 07:55 am on 27 Apr
For the best experience use inshorts app on your smartphone