ಸಾಲಿಗ್ರಾಮ ತಾಲ್ಲೂಕಿನ ಚನ್ನಂಗೆರೆ ಗ್ರಾಮದಲ್ಲಿ ಶ್ರೀ ಕೊಳ್ಳಿ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಜರುಗಿತು. ಮಧ್ಯಾಹ್ನ ದೇವಾಲಯದಿಂದ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ತಂದು ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ಸಾರ್ವಜನಿಕರು ತೇರು ಎಳೆದಿದ್ದು, ಈ ವೇಳೆ ಭಕ್ತರು ಹಣ್ಣು-ದವನ ಎಸೆದರು. ಹಾಸನ, ಮಂಡ್ಯ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರಿಗೆ ಮಜ್ಜಿಗೆ-ಪಾನಕ ವ್ಯವಸ್ಥೆ ಮಾಡಲಾಗಿತ್ತು.
short by
Koushik KS /
07:47 pm on
30 Apr