For the best experience use Mini app app on your smartphone
ಹೆಚ್.ಡಿ.ಕೋಟೆ ತಾಲ್ಲೂಕಿನ ಹೆಬ್ಬಳ್ಳ ಗ್ರಾಮದ ರೈತ ಮಹದೇವ್ ನಾಯಕ್ ಎಂಬಾತನ ಮೇಲೆ ಕಾಡುಹಂದಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹದೇವ್ ಮೇಲೆ ಏಕಾಏಕಿ ಕಾಡುಹಂದಿ ದಾಳಿ ಮಾಡಿದ್ದು, ರಕ್ಷಣೆಗಾಗಿ ಕೂಗಾಟ ನಡೆಸಿದ್ದಾನೆ. ಅಕ್ಕಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಆತನನ್ನು ರಕ್ಷಿಸಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅರಣ್ಯ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನಿಂದ ಮಾಹಿತಿ ಪಡೆದಿದ್ದಾರೆ.
short by Prashant badiger / 07:24 pm on 30 Apr
For the best experience use inshorts app on your smartphone