ಜಾನಪದವು ಮನುಷ್ಯ ಸಂಬಂಧಗಳ ಮಹತ್ವವನ್ನು ತಿಳಿಸುವುದರ ಜತೆಗೆ ಒಗ್ಗೂಡಿಸುವ ಕೆಲಸ ಮಾಡುತ್ತದೆ ಎಂದು ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಚಿಕ್ಕಲೂರು ಹೇಳಿದರು. ಮೈಸೂರಿನಲ್ಲಿ ಚಿಣ್ಣರಿಗಾಗಿ ಜಾನಪದ ಸಾಹಿತ್ಯ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಮೊಬೈಲ್, ಟಿವಿ ಹಾಗೂ ಕೆಟ್ಟ ಅಭಿರುಚಿಯ ಸಿನಿಮಾ ಹಾಡುಗಳಿಂದ ದೂರವಿದ್ದು, ಜಾನಪದದತ್ತ ವಾಲಬೇಕು ಎಂದರು.
short by
Lloyd Dias /
11:29 pm on
04 May