ಹುಣಸೂರು ತಾಲ್ಲೂಕು ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಉರುಳು ಹಾಕಿ ಜಿಂಕೆಯನ್ನು ಹಿಡಿದು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ. ಕೊಳವೆ ಹಾಡಿಯ ಗಣೇಶ್, ಬಿಲ್ಲೇನಹೊಸಳ್ಳಿ ಹಾಡಿಯ ರಾಮ ಬಂಧಿತರು. ಆರೋಪಿಗಳಿಂದ 40 ಕೆ.ಜಿ ಜಿಂಕೆಯ ಮಾಂಸ, ಕೃತ್ಯಕ್ಕೆ ಬಳಸಿದ್ದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ. ಪರಾರಿಯಾದ ಗಣೇಶ್, ವಿಶ್ವ, ಕುಮಾರ್ ಪತ್ತೆಗೆ ಶೋಧ ಕಾರ್ಯ ನಡೆದಿದೆ.
short by
Prashant badiger /
07:46 pm on
02 May